ಪ್ರಚಲಿತ

ಬ್ರೇಕಿಂಗ್ : ಕರ್ನಾಟಕ ಬಂದ್ ನಿಶ್ಚಿತ!! ಮತ್ತೆ ಘೋಷಿಸಿದ ವಾಟಾಳ್!! ಶಾ ನಂತರ ನಮೋ ಜಾತ್ರೆಗೆ ಬೆದರಿದ ಕಾಂಗ್ರೆಸ್!!

ಸ್ವತಃ ಆಡಳಿತ ನಡೆಸುತ್ತಿರುವ ಸರಕಾರವೇ ತನ್ನ ರಾಜ್ಯವನ್ನು ಬಂದ್ ಮಾಡಿ ರಾಜಕೀಯ ಲಾಭ ಪಡೆಯುತ್ತಿರುವ ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್‌ ಸರಕಾರ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದೆ…!! ತನ್ನ ಸರಕಾರದ ಉಳಿವಿಗಾಗಿ ಯಾವ ಮಟ್ಟಕ್ಕೂ ಇಳಿಯಲು ತಯಾರಾಗಿರುವ ಸಿದ್ದರಾಮಯ್ಯ ಸರಕಾರ ಇದೀಗ ಕರ್ನಾಟಕ ಬಂದ್ ಗೆ ಬೆಂಬಲ ನೀಡುವ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ…!!

ಕರ್ನಾಟಕವನ್ನು ಗುತ್ತಿಗೆ ಪಡೆದವರಂತೆ ವರ್ತಿಸುತ್ತಿರುವ ವಾಟಾಳ್ ನಾಗಾರಾಜ್ ನೇತ್ರತ್ವದ ಕನ್ನಡ ಚಳವಳಿ ವಾಟಾಳ್ ಪಕ್ಷ ಮತ್ತು ಕೆಲ ಕಾಂಗ್ರೆಸ್ ಪ್ರೇರಿತ ಸೋಕಾಲ್ಡ್ ಸಂಘಟನೆಗಳು ಕರ್ನಾಟಕವನ್ನು ಪದೇ ಪದೇ ಬಂದ್ ಮಾಡುವ ಮೂಲಕ ಸಾರ್ವಜನಿಕರ ಮೂಲಭೂತ ಹಕ್ಕುಗಳಿಗೆ ತೊಂದರೆ ಮಾಡುತ್ತಿದ್ದಾರೆ…!!!

ಮಹಾದಾಯಿ ವಿಚಾರವಾಗಿ ರಾಜಕೀಯ ಲಾಭ ಪಡೆಯುತ್ತಿರುವ ವಾಟಾಳ್ ನಾಗರಾಜ್ ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕ್ರಮಗಳನ್ನು ವಿಫಲಗೊಳಿಸಲು ಕರ್ನಾಟಕ ಬಂದ್ ನೆಪದಲ್ಲಿ ಅಡ್ಡಿಪಡಿಸುತ್ತಿದೆ…!!!
ಈಗಾಗಲೇ ರಾಜ್ಯದಲ್ಲಿ ಸಂಚಲನ ಮೂಡಿಸಿದ ಯಡಿಯೂರಪ್ಪ ನವರ ನೇತ್ರತ್ವದಲ್ಲಿ ನಡೆದ ‘ಪರಿವರ್ತನಾ ಯಾತ್ರೆ’ಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಕರ್ನಾಟಕ ಬಂದ್ ಮಾಡುವ ಮೂಲಕ ಬಿಜೆಪಿ ಯ ಕಾರ್ಯಕ್ರಮಗಳನ್ನು ವಿಫಲಗೊಳಿಸಲು ಪ್ರಯತ್ನಿಸುತ್ತಿದೆ…!!

ದೇಶದಲ್ಲಿ ಮೂಲೆಗುಂಪಾಗಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ಹೇಗಾದರು ತಮ್ಮ ಪಕ್ಷವನ್ನು ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ಯ ರಾಷ್ಟ್ರೀಯ ನಾಯಕರು ಕರ್ನಾಟಕಕ್ಕೆ ಆಗಮಿಸುವುದನ್ನು ತಡೆಯಲು ಪ್ರಯತ್ನಿಸುತ್ತಲೇ ಇದ್ದಾರೆ…!
ಮೈಸೂರಿನಲ್ಲಿ ನಡೆದ ಪರಿವರ್ತನಾ ಯಾತ್ರೆಗೆ ಬಿಜೆಪಿ ಯ ಚಾಣಾಕ್ಯ ಅಮಿತ್ ಷಾ ಆಗಮಿಸುತ್ತಿರುವ ವಿಚಾರ ತಿಳಿದ ಕಾಂಗ್ರೆಸ್ ಕಂಗಾಲಾಗಿತ್ತು…!

ಅದೇ ಕಾರಣಕ್ಕಾಗಿ ಕೆಲ ಸೋಕಾಲ್ಡ್ ಕನ್ನಡ ಪರ ಸಂಘಟನೆಗಳ ಜೊತೆ ಸೇರಿ ಕರ್ನಾಟಕ ಬಂದ್ ಮಾಡಿಸಿದ್ದರು…!!
ಆದರೆ ಕಾಂಗ್ರೆಸ್ ನ ಎಲ್ಲಾ ಬೇಲಿಗಳನ್ನು ಮುರಿದ ಅಮಿತ್ ಷಾ ಕರ್ನಾಟಕಕ್ಕೆ ಲಗ್ಗೆಯಿಟ್ಟು ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದರು.

ಈ ಮೂಲಕ ಕಾಂಗ್ರೆಸ್ ಗೆ ಸೆಡ್ಡು ಹೊಡೆದ ರಾಜ್ಯ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಕರೆತರುವ ಮೂಲಕ ಕಾಂಗ್ರೆಸ್ ಗೆ ಶಾಕ್ ನೀಡಲು ಎಲ್ಲಾ ತಯಾರಿ ನಡೆಸಿದ್ದಾರೆ…!!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕರ್ನಾಟಕಕ್ಕೆ ಆಗಮಿಸಿದ ವೇಳೆಯೇ ಕಂಗಾಲಾಗಿದ್ದ ರಾಜ್ಯ ಕಾಂಗ್ರೆಸ್ ಇದೀಗ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸುವ ವಿಚಾರ ತಿಳಿದು ಬೆಚ್ಚಿಬಿದ್ದಿದೆ…!!! ಫೆಬ್ರವರಿ ೪ ರಂದು ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಗಮಿಸುತ್ತಿರುವ ನರೇಂದ್ರ ಮೋದಿಯವರ ಈ ಭೇಟಿಯನ್ನು ಹೇಗಾದರೂ ತಡೆಯುವ ಪ್ರಯತ್ನ ನಡೆಸುತ್ತಿರುವ ರಾಜ್ಯ ಸರಕಾರ ಮತ್ತು ವಾಟಾಳ್ ನಾಗರಾಜ್ ಮತ್ತೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ…!!

ಪದೇ ಪದೇ ಕರ್ನಾಟಕ ಬಂದ್ ಮಾಡಿ ಸಾರ್ವಜನಿಕರ ಹಕ್ಕುಗಳಿಗೆ ತೊಂದರೆಯಾಗುತ್ತಿದೆ ಎಂದು ಸ್ವತಃ ಹೈಕೋರ್ಟ್ ಕರ್ನಾಟಕ ರಾಜ್ಯ ಸರಕಾರ ಮತ್ತು ವಾಟಾಳ್ ನಾಗರಾಜ್ ನೇತ್ರತ್ವದ ಕನ್ನಡ ಚಳವಳಿ ವಾಟಾಳ್ ಪಕ್ಷಕ್ಕೆ ನೋಟೀಸ್ ಜಾರಿಗೊಳಿಸಿದೆ..!! ಕನ್ನಡ ಚಳವಳಿ ವಾಟಾಳ್ ಪಕ್ಷವನ್ನು ನಿಷೇಧಿಸುವ ಎಚ್ಚರಿಕೆಯನ್ನು ಹೈಕೋರ್ಟ್ ನೀಡಿದೆ…

ನರೇಂದ್ರ ಮೋದಿಯವರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷ ಲಕ್ಷ ಕಾರ್ಯಕರ್ತರು ಆಗಮಿಸುವ ಹಿನ್ನೆಲೆಯಲ್ಲಿ ರಾಜ್ಯ ಗುಪ್ತಚರ ಇಲಾಖೆಯು ನೀಡಿದ ವರದಿ ನೋಡಿದ ರಾಜ್ಯ ಕಾಂಗ್ರೆಸ್ ಸರಕಾರವು ಬೆಚ್ಚಿಬಿದ್ದಿದೆ…!! ಈಗಾಗಲೇ ದೇಶದ ಎಲ್ಲಾ ರಾಜ್ಯಗಳಲ್ಲೂ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಕರ್ನಾಟಕವನ್ನು ಹೇಗಾದರೂ ಉಳಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಹರಸಾಹಸ ಪಡುತ್ತಿದ್ದೆ..!!!
ಮುಂದಿನ ಚುನಾವಣೆಯಲ್ಲಿ ಗೆದ್ದು ಅಧಿಕಾರ ಪಡೆಯಲು ಎಲ್ಲಾ ತಯಾರಿ ನಡೆಸಿರುವ ಬಿಜೆಪಿಯ ತಂತ್ರಕ್ಕೆ ಈಗಾಗಲೇ ಕಾಂಗ್ರೆಸ್ ಕಂಗಾಲಾಗಿದೆ..!!!
–ಅರ್ಜುನ್

Tags

Related Articles

Close