ಪ್ರಚಲಿತ

ಮೋದಿ ಬಜೆಟ್ ಗೂ ಮೊದಲು ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಹೂಡುತ್ತಿರುವ ರಣತಂತ್ರವೇನು ಗೊತ್ತಾ? ಕ್ರೆಡಿಟ್ ಗಿಟ್ಟಿಸಿಕೊಳ್ಳುವತ್ತ ಸಿದ್ದರಾಮಯ್ಯ!!

ಈಗಾಗಲೇ ಸಿದ್ದರಾಮಯ್ಯ ಸರ್ಕಾರವು ಕರ್ನಾಟಕದಲ್ಲಿ ಮಾಡಿದ ಅವಾಂತರಗಳ ಪಟ್ಟಿ ಮಾಡುತ್ತಾ ಹೋದರೆ ಅದಕ್ಕೇ ಲೆಕ್ಕವೇ ಸಿಗೋದಿಲ್ಲ!! ಈಗಾಗಲೇ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ನೀಡಿದ ಅಕ್ಕಿಯನ್ನು “ಅನ್ನಭಾಗ್ಯ” ಎಂದು ಹೆಸರಿಟ್ಟು ಅದು ತಾವೇ ಬಡವರಿಗಾಗಿ ನೀಡಿದ ಹೊಸ ಯೋಜನೆ ಎಂದು ಬೊಬ್ಬಿಡುತ್ತಾ ತಿರುಗಾಡುತ್ತಿರುವ ವಿಚಾರ ತಿಳಿದೇ ಇದೆ. ಆದರೆ ಇದೀಗ ಚುನಾವಣೆ ಹೊಸ್ತಿನಲ್ಲಿರುವ ಕರ್ನಾಟಕಕ್ಕೆ ಇಂದು ಕೇಂದ್ರ ಬಜೆಟ್ ಮಂಡನೆ ನಡೆಯುತ್ತಿದ್ದು, ಇದರಿಂದ ಸಿದ್ದರಾಮಯ್ಯನವರು ನಡೆಸುವ ಗಿಮಿಕ್ಸ್ ಗಳಿಗೆ ಮೋದಿ ರಣತಂತ್ರ ಹೂಡಲಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿದೆ.

ಹೌದು… ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮ ರಾಜಕೀಯ ಲಾಭಕ್ಕೋಸ್ಕರ ಬಳಸಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಸರ್ಕಾರವು ರಾಜ್ಯದ ಜನರನ್ನು ಮರುಳು ಮಾಡುತ್ತಾ ತನ್ನ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಪ್ರತಿ ಬಾರಿಯೂ ನರೇಂದ್ರ ಮೋದಿಯವರ ಯಶಸ್ಸನ್ನು ಸಹಿಸಿಕೊಳ್ಳಲಾಗದೇ ಕೆಲ ಬುದ್ದಿಜೀವಿಗಳು ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಿದ್ದು, ಕೇಂದ್ರ ಸರ್ಕಾರ ನೀಡುತ್ತಿದ್ದ ಸವಲತ್ತುಗಳನ್ನು ತನ್ನದೇ ಸವಲತ್ತುಗಳೆಂದು ಬಿಂಬಿಸಿ ರಾಜ್ಯದ ಮುಗ್ಧ ಜನರನ್ನು ಮರುಳು ಮಾಡುತ್ತಾ ಸಾಗುತ್ತಿದ್ದಾರೆ.

ಆದರೆ ಇಂದು ಕೇಂದ್ರ ಬಜೆಟ್ ಮಂಡನೆ ನಡೆಯಲಿದ್ದು, ಚುನಾವಣೆ ಹೊಸ್ತಿನಲ್ಲಿರುವ ಕರ್ನಾಟಕಕ್ಕೆ ಭರಪೂರ ಯೋಜನೆಗಳು ಜಾರಿ ಆಗಲಿವೆ ಎಂಬ ನಿರೀಕ್ಷೆಗಳು ಜನ ಸಾಮಾನ್ಯರಲ್ಲಿ ಹುಟ್ಟಿಕೊಂಡಿದೆ. ಹಾಗಾಗಿ ಪ್ರಧಾನಿ ಮೋದಿ ತಮ್ಮ ವಿಶೇಷ ಬಜೆಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಚುನಾವಣಾ ರಣತಂತ್ರ ಹೂಡ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವುದು ಮಾತ್ರ ಅಕ್ಷರಶಃ ನಿಜ.

ಫೆಬ್ರವರಿ 4 ರಂದು ಬೆಂಗಳೂರಲ್ಲಿ ನಡೆಯುವ `ಪರಿವರ್ತನಾ ಯಾತ್ರೆ’ಯ ಸಮಾರೋಪದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಸಮಾರೋಪದ ಕಾರ್ಯಕ್ರಮದಲ್ಲಿಯೇ ರಾಜ್ಯಕ್ಕೆ ಬಂಪರ್ ಕೊಡುಗೆಗಳನ್ನು ನೀಡುತ್ತಾರೆ ಎನ್ನುವ ಅಂಶಗಳನ್ನು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಬೆಂಗಳೂರು ಜನರಿಗೆ ಫೆಬ್ರವರಿ 04 ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಸಬರ್ಬನ್ ರೈಲು ಘೋಷಣೆ ಮಾಡ್ತಾರೆ ಅಂತಾ ಹೇಳಲಾಗುತ್ತಿದೆ.

ಈಗಾಗಲೇ, ನರೇಂದ್ರ ಮೋದಿಯವರ ಮೋಡಿಗೆ ನಡುಗಿ ಹೋಗಿರುವ ಸಿ ಎಂ ಸಿದ್ದರಾಮಯ್ಯನವರು ಗುಪ್ತಚರ ಇಲಾಖೆಗೆ ಮೊರೆ ಹೋಗಿದ್ದಲ್ಲದೇ, ಈಗಾಗಲೇ ರಾಜ್ಯ ಸರ್ಕಾರವು ಗುಪ್ತಚರ ಇಲಾಖೆಯ ಆಂತರಿಕ ವರದಿಯನ್ನು ತರಿಸಿಕೊಂಡು ತೀವ್ರ ಕುತೂಹಲವನ್ನು ಸೃಷ್ಟಿಸಿತ್ತು!! ಅಷ್ಟೇ ಅಲ್ಲದೇ, ಫೆಬ್ರವರಿ 4 ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದ ಬಗ್ಗೆ ರಾಜ್ಯ ಸರ್ಕಾರಕ್ಕೆ ಆತಂಕ ಎದುರಾಗಿದ್ದು, ಸಮಾವೇಶದ ಕುರಿತು ಸಮಗ್ರ ಮಾಹಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಗುಪ್ತಚರ ಇಲಾಖೆಗೆ ಸೂಚನೆ ನೀಡಿದ್ದ ವಿಚಾರ ತಿಳಿದಿದೆ.

ಇದೀಗ ಪ್ರಧಾನಿ ಮೋದಿ ತಮ್ಮ ವಿಶೇಷ ಬಜೆಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಚುನಾವಣಾ ರಣತಂತ್ರ ಹೂಡುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದು, ಫೆಬ್ರವರಿ 4 ರಂದು ಬೆಂಗಳೂರಲ್ಲಿ ನಡೆಯುವ `ಪರಿವರ್ತನಾ ಯಾತ್ರೆ’ಯ ಸಮಾರೋಪದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಹಾಗಾಗಿ ಸಮಾರೋಪದ ಕಾರ್ಯಕ್ರಮದಲ್ಲಿಯೇ ರಾಜ್ಯಕ್ಕೆ ಬಂಪರ್ ಕೊಡುಗೆಗಳನ್ನು ನೀಡುತ್ತಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಂಗಳೂರು ಜನರಿಗೆ ಫೆಬ್ರವರಿ 04 ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಸಬರ್ಬನ್ ರೈಲು ಘೋಷಣೆ ಮಾಡ್ತಾರೆ ಅಂತಾ ಹೇಳಲಾಗುತ್ತಿದೆ.

ಹಾಗಾಗಿ ಬೆಂಗಳೂರು ರೈಲ್ವೆ ನಿಲ್ದಾಣಗಳು ಅಂತರಾಷ್ಟ್ರೀಯ ಮಟ್ಟಕ್ಕೆ ಏರಬಹುದು. ರಾಜ್ಯ ಸರ್ಕಾರದ ಸಹಾಯ ಪಡೆಯದೇ 150 ಕಿಲೋಮೀಟರ್ ವ್ಯಾಪ್ತಿಯ ಸಬರ್ಬನ್ ರೈಲು ನಿರ್ಮಾಣ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಮಧ್ಯ ಪ್ರದೇಶ ಹಾಗೂ ಕರ್ನಾಟಕ ಸದ್ಯ ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯಗಳಾಗಿದ್ದು, ಎರಡು ರಾಜ್ಯಗಳಿಗೆ ಮೋದಿ ಚುನಾವಣಾ ಗಿಫ್ಟ್ ನೀಡುವ ಸಾಧ್ಯತೆ ಇದೆ.

ಅದರಲ್ಲೂ ದಕ್ಷಿಣ ಭಾರತದಲ್ಲಿ ಅಧಿಕಾರದ ಚುಕ್ಕಾಣಿಯ ಯೋಜನೆ ಮಾಡುತ್ತಿರುವ ಮೋದಿ, ಕರ್ನಾಟಕಕ್ಕೆ ವಿಶೇಷ ಆಫರ್ ನೀಡಬಹುದು ಎನ್ನುವ ನಿರೀಕ್ಷೆ ಇದೀಗ ಹೆಚ್ಚಿದೆ. ಹಾಗಾಗಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ರಣತಂತ್ರ ಹೂಡುತ್ತಾರೆ ಅನ್ನುವ ಸಮಾಚಾರ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವುದು ಮಾತ್ರ ಅಕ್ಷರಶಃ ನಿಜ.

ಹಾಗಾದರೆ ಕೇಂದ್ರ ಬಜೆಟ್ ನಿಂದ ಕರ್ನಾಟಕಕ್ಕೆ ಏನೇನು ಸವಲತ್ತುಗಳು ಸಿಗಬಹುದು ಗೊತ್ತೇ?

* ರಾಜಧಾನಿ ಬೆಂಗಳೂರಿಗರ ಬಹು ವರ್ಷದ ಬೇಡಿಕೆಯಾದ 150 ಕಿ.ಮೀ.ಬೆಂಗಳೂರು ಸಬರ್ಬನ್ ರೈಲು ಸೇವೆಯನ್ನು ಬಜೆಟ್‍ನಲ್ಲಿ ಘೋಷಿಸುವ ಸಾಧ್ಯತೆ.

* ಬೆಂಗಳೂರು-ಹುಬ್ಬಳ್ಳಿ-ಮುಂಬೈ ಸೂಪರ್ ಫಾಸ್ಟ್.

* ಹುಬ್ಬಳ್ಳಿ-ಬೆಳಗಾವಿ ರಾತ್ರಿ ರೈಲ್ವೆ ಸೇವೆ.

* ಹಂಪಿ ಎಕ್ಸ್ ಪ್ರೆಸ್ ರೈಲ್ವೆಗೆ ಪ್ರಯಾಣಿಕರ ಒತ್ತಡ ಹೆಚ್ಚಳ ಹಿನ್ನೆಲೆ ಹೊಸಪೇಟೆ-ಬೆಂಗಳೂರು ನಡುವೆ ಮತ್ತೂಂದು ರೈಲು ಆರಂಭಿಸುವ ಸಾಧ್ಯತೆಯಿದೆ.

* ಸೆಂಟ್ರಲ್ ರೈಲ್ವೆ ವಲಯದಲ್ಲಿರುವ ಕಲಬುರಗಿ ಪ್ರತ್ಯೇಕ ವಲಯ ಮಾಡುವ ಬೇಡಿಕೆ, ಮಂಗಳೂರನ್ನು ನೈಋತ್ಯ ವಲಯಕ್ಕೆ ಸೇರಿಸುವ ಬೇಡಿಕೆ ಬಗ್ಗೆ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆದು ಬಜೆಟ್‍ನಲ್ಲಿ ಸೇರಿಸಬಹುದಾದ ವಿಚಾರಗಳ ಪ್ರಸ್ತಾವನೆ ಸಿದ್ಧಗೊಂಡಿದೆ.

* ರಾಜ್ಯ ಸರ್ಕಾರ ಸಹಕಾರದೊಂದಿಗೆ ಖಾಸಗಿ-ಸಾರ್ವಜನಿಕ-ಸಹಭಾಗಿತ್ವದಡಿ ಬಾಣಸವಾಡಿ, ಯಲಹಂಕ, ಯಶವಂತಪುರ, ಕೆಂಗೇರಿ, ಕಾಕ್ಸ್‍ಟೌನ್, ಮಲ್ಲೇಶ್ವರ, ರಾಮನಗರ, ವೈಟ್‍ಫೀಲ್ಡ್, ದೊಡ್ಡಬಳ್ಳಾಪುರ, ನೆಲಮಂಗಲ ಮಾರ್ಗದಲ್ಲಿ ಸಬರ್ಬನ್ ರೈಲು ಸೇವೆಗೆ ನಕ್ಷೆ.

* ಯಶವಂತಪುರ- ಹೊಸೂರು ದ್ವಿಪಥ (ಡಬಲಿಂಗ್) ಹಾಗೂ ವಿದ್ಯುದ್ದೀಕರಣ.
ಹಾಗಾಗಿ ಕೆಲವೇ ಗಂಟೆಗಳಲ್ಲಿ ನಡೆಯಲಿರುವ ಕೇಂದ್ರ ಬಜೆಟ್ ಮಂಡನೆಯಲ್ಲಿ ಕರ್ನಾಟಕಕ್ಕೆ ಯಾವ ಯೋಜನೆಗಳು ಲಭ್ಯವಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ಅಷ್ಟೇ ಅಲ್ಲದೇ ಸಿದ್ದರಾಮಯ್ಯನವರ ತಂತ್ರಕ್ಕೆಲ್ಲಾ ಬ್ರೇಕ್ ಬೀಳಲಿದೆಯೇ ಅನ್ನೋದನ್ನು ಕೂಡ ಕಾದು ನೋಡಬೇಕಾಗಿದೆ!!

– ಅಲೋಖಾ

 

Tags

Related Articles

Close