ಪ್ರಚಲಿತ

ಬ್ರೇಕಿಂಗ್! ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಸ್ಕೆಚ್! ಮೂವರು ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್!

ಅಧಿಕಾರ ಕಳೆದುಕೊಂಡ ನಂತರ ಬೆಕ್ಕಸ ಬೆರಗಾಗಿದ್ದ ಮಾಜಿ ಸಚಿವ ರಮನಾಥ್ ರೈ ಅವರ ಬೆಂಬಲಿಗರು ಅಟ್ಟಹಾಸಕ್ಕೆ ಇದೀಗ ಪೊಲೀಸರು ಬ್ರೇಕ್ ಹಾಕಿದ್ದಾರೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತನ ಹತ್ಯೆಗೆ ಸ್ಕೆಚ್ ಹಾಕಿದ್ದರ ಪರಿಣಾಮ ಇದೀಗ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತನಾಗಿರುವ ಮಾಜಿ ಸಚಿವ ರಮನಾಥ್ ರೈ ಅವರ ಬೆಂಬಲಿಗ ಸುರೇಂದ್ರ ಮತ್ತು ಆತನ ಸಹಚರರಿಂದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನ ಮೇಲೆ ಹತ್ಯೆಗೆ ಯತ್ನ ಕೇಸ್ ದಾಖಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತ ಸುರೇಂದ್ರ ಎಂಬಾತ ಹಗಲು ಹೊತ್ತಿನಲ್ಲೇ ಹರಿದ ಬಟ್ಟೆಯಲ್ಲಿ ಬಹಿರಂಗವಾಗಿಯೇ ತಲವಾರು ಝಳಪಿಸುತ್ತಾ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ್ದರು.

ಭಾರತೀಯ ಜನತಾ ಪಕ್ಷದ ಕಾರ್ಯಕರ್ತನನ್ನು ಅಟ್ಟಾಡಿಸಿಕೊಂಡು ಹೋಗಿ ನಂತರ ಆತನ ಮೇಲೆ ಹಲ್ಲೆ ನಡೆಸಿ ತಲವಾರು ಪ್ರದರ್ಶಿಸಿದ್ದರು. ಇದನ್ನು ಸ್ಥಳದಲ್ಲೇ ಇದ್ದ ಸಾರ್ವಜನಿಕರು ವೀಡಿಯೋ ಎರಕಾರ್ಡ್ ಮಾಡಿದ್ದು ರಾಷ್ಟ್ರಮಟ್ಟದಲ್ಲೇ ಈ ವಿಚಾರ ಸದ್ದು ಮಾಡಿತ್ತು. ಕೇಸ್ ದಾಖಲಾಗುತ್ತಲೇ ಕಾಂಗ್ರೆಸ್ ಕಾರ್ಯಕರ್ತ ಸುರೇಂದ್ರ ಹಾಗೂ ಆತನ ಸಹಚರರು ತಲೆಮರೆಸಿಕೊಂಡಿದ್ದರು.

Related image

ಆದರೆ ಇದೀಗ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತ ಸುರೇಂದ್ರ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.

ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಲು ತಲವಾರು ಝಳಪಿಸಿದ್ದ ವಿಡಿಯೋ ಭಾರೀ ವೈರಲ್ ಆಗಿದ್ದು ಹತ್ಯೆಗೆ ಸ್ಕೆಚ್ ಪ್ರಕರಣ ಗಂಭೀರತೆಯನ್ನು ಪಡೆದುಕೊಂಡಿತ್ತು. ಈ ಬಗ್ಗೆ ಸ್ವತಃ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರು ಆರೋಪಿಗಳ ಬಂಧನಕ್ಕೆ ಒತ್ತಡ ಹಾಕಿದ್ದರಿಂದ ಪ್ರಕರಣ ಮತ್ತಷ್ಟು ಗಂಭೀರತೆಯನ್ನು ಪಡೆದುಕೊಂಡಿತ್ತು. ಇದೀಗ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು ಪ್ರಕರಣ ಕೊಂಚ ಸುಖಾಂತ್ಯ ಕಂಡಿದೆ.

-ಸುನಿಲ್ ಪಣಪಿಲ

Tags

Related Articles

Close