ಪ್ರಚಲಿತ

ಬಿಗ್ ಬ್ರೇಕಿಂಗ್!! ಚಿದು ಪುತ್ರ ಅರೆಸ್ಟ್!! ಶುರುವಾಯ್ತು ಕಾಂಗ್ರೆಸ್ ಪತನದ ಆರಂಭ!!

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರನ್ನು 14 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಮಗ ಕಾರ್ತಿ ಚಿದಂಬರಂ ಅವರ ಹೆಸರು ಕೂಡ ಕೇಳಿ ಬಂದಿತ್ತು!! ಆದರೆ ಇದೀಗ ಕಾರ್ತಿ ಚಿದಂಬರಂ ಪೊಲೀಸರ ಅಥಿತಿಯಾಗಿದ್ದು ಕಾಂಗ್ರೆಸ್ ನ ಆಡಳಿತದಲ್ಲಿ ನಡೆದ ಬೃಹತ್ ಹಗರಣವೊಂದು ಇದೀಗ ಬಟಾಬಯಲಾಗಿದೆ.

ಹಗರಣಗಳ ಮೇಲೆ ಹಗರಣಗಳ ಸುರಿಮಳೆಯನ್ನೇ ಹೊತ್ತಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಕುಟುಂಬ ಇದೀಗ ಮತ್ತೊಂದು ಸಂಕಷ್ಟವನ್ನು ಎದುರು ನೋಡುತ್ತಿದೆ. ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ಸಂಬಂಧ ಕೇಂದ್ರ ಮಾಜಿ ಸಚಿವ ಕಾರ್ತಿ ಚಿದಂಬರಂ ಇಂದು ಬೆಳಗ್ಗೆ ಸಿಬಿಐ, ಚೆನ್ನೈ ಏರ್ ಪೆÇೀರ್ಟ್‍ನಲ್ಲಿ ಬಂಧಿಸಿದೆ.

ಹೌದು… ನಿನ್ನೆಯಷ್ಟೇ ಕಾರ್ತಿ ಸಂಸ್ಥೆಯ ಸಿಎ ಭಾಸ್ಕರ್ ರಾಮನ್ ಅವರನ್ನು ಬಂಧಿಸಲಾಗಿದ್ದು, ಇಂದು ಲಂಡನ್ ನಿಂದ ವಾಪಸ್ ಆಗುತ್ತಿದ್ದಂತೆಯೇ ಚೆನ್ನೈನ ವಿಮಾನ ನಿಲ್ದಾಣದಲ್ಲಿ ಕಾರ್ತಿ ಚಿದಂಬರ್ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ!!

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಸಹ ಪ್ರಕರಣ ದಾಖಲಿಸಿಕೊಂಡಿತ್ತು. ಹಲವು ದಿನಗಳಿಂದ ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಅವರ ವಿರುದ್ಧ ದಾಖಲಾಗಿದ್ದ ದೂರಿನ ಅನ್ವಯ ಹಲವು ಬಾರಿ ವಿಚಾರಣೆಗೆ ಒಳಗಾಗಿದ್ದರು.

ಅಷ್ಟೇ ಅಲ್ಲದೇ, ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಚಿದಂಬರಂ ಸಚಿವರಾಗಿದ್ದರು, ಈ ವೇಳೆ ಐಎನ್ ಎಕ್ಸ್ ಮೀಡಿಯಾ ಸಂಸ್ಥೆ ಹಗರಣ ನಡೆದಿತ್ತು. ಆದರೆ ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಕಾರ್ತಿ ಚಿದಂಬರಂ ವಿರುದ್ಧ ಇಡಿ ಮೇ, 2017ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಕಾರ್ತಿ ಚಿದಂರಬರಂ ನನ್ನು ಬಂಧಿಸಲಾಗಿದೆ.

ಏನಿದು ಐಎನ್ ಎಕ್ಸ್ ಮೀಡಿಯಾ ಪ್ರಕರಣ?

2008ರಲ್ಲಿ ಐಎನ್‍ಎಕ್ಸ್ ಮೀಡಿಯಾ ಕಾರ್ತಿ ಅವರ ಅಡ್ವಾಂಟೇಜ್ ಸ್ಟ್ರಾಟೆಜಿಕ್ ಕನ್ಸಲ್ಟಿಂಗ್ ಸಂಸ್ಥೆ ಹಾಗೂ ಅದರ ಸಹ ಸಂಸ್ಥೆಗಳಿಗೆ ಹಣ ಪಾವತಿಸಿ ಶೇರ್ ಗಳನು ನೀಡಿತ್ತು. ಅಷ್ಟೇ ಅಲ್ಲದೇ, ಪೀಟರ್ ಮುಖರ್ಜಿ ಅವರ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆ ಹಲವು ಕಂತುಗಳಲ್ಲಿ ಹಣವನ್ನು ಪಾವತಿಸಿದ್ದು, 60 ಶೇರುಗಳನ್ನು ಲಂಡನ್ ಮೂಲದ ಆರ್ಟಿವಿಯಾ ಡಿಜಿಟಲ್ ಯುಕೆ ಲಿಮಿಟಡ್ ಕಂಪೆನಿಯಿಂದ ಕಾರ್ತಿ ಅವರ ಸಂಸ್ಥೆಗೆ ವರ್ಗಾಯಿಸಲಾಗಿತ್ತು ಎಂದು ವರದಿಯಾಗಿದೆ.

ಈ ಹಿಂದೆ ಕಾರ್ತಿ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ಕಾರ್ತಿ ಅವರ ಸಂಸ್ಥೆಯ ಬಗ್ಗೆ ಮಾಹಿತಿವುಳ್ಳ ಹಾರ್ಡ್ ಡಿಸ್ಕ್‍ಗಳನ್ನ ಜಪ್ತಿ ಮಾಡಲಾಗಿತ್ತು. ಕಾರ್ತಿ ಅವರು ಐಎನ್‍ಎಕ್ಸ್ ಮೀಡಿಯಾದಿಂದ ಕಿಕ್ ಬ್ಯಾಕ್ ಪಡೆದಿದ್ದಾರೆಂಬುದು ತನಿಖೆಯಿಂದ ಬಹಿರಂಗವಾಗಿತ್ತು. 2008 ಸೆಪ್ಟೆಂಬರ್ 22ರಂದು ಎಫ್ ಐಪಿಬಿ(ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ) ನಿಂದ 220 ಮಿಲಿಯನ್ ಡಾಲರ್ ಕ್ಲಿಯರೆನ್ಸ್‍ಗಾಗಿ ಅರ್ಜಿ ಹಾಕಿದ್ದ ಐಎನ್‍ಎಕ್ಸ್ ಮೀಡಿಯಾ, ಕಾರ್ತಿ ಅವರ ಸಂಸ್ಥೆಗೆ 35 ಲಕ್ಷ ರೂಪಾಯಿ ನೀಡಿದೆ ಎನ್ನುವ ಆರೋಪ ಕೇಳಿ ಬಂಧಿಸಿತ್ತು.

ಪೀಟರ್ ಮುಖರ್ಜಿ ಹಾಗೂ ಇಂದ್ರಾಣಿ ಮುಖರ್ಜಿ ನೇತೃತ್ವದ ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ವಿದೇಶಿ ಹೂಡಿಕೆಗೆ 2007ರಲ್ಲಿ ಅಂದಿನ ಹಣಕಾಸು ಸಚಿವ ಪಿ. ಚಿದಂಬರಂ ಅನುಮತಿ ನೀಡಿದ್ದರು. ಇದಕ್ಕಾಗಿ ಸಂಸ್ಥೆಯಿಂದ ಕಾರ್ತಿ ಚಿದಂಬರಂಗೆ 10 ಲಕ್ಷ ರೂಪಾಯಿ ಕಿಕ್ ಬ್ಯಾಕ್ ದೊರೆತಿತ್ತು ಎನ್ನಲಾಗಿದೆ. ಅಲ್ಲದೇ, ವಿದೇಶಿ ಹೂಡಿಕೆ ಪೆÇ್ರೀತ್ಸಾಹ ಮಂಡಳಿ 4 ಕೋಟಿ ರೂಪಾಯಿ ಹೂಡಿಕೆಗೆ ಅನುಮತಿ ಕಲ್ಪಿಸಿದ್ದರೂ, ಇದನ್ನು ಮೀರಿ 305 ಕೋಟಿ ರೂಪಾಯಿ ವಿದೇಶಿ ಹೂಡಿಕೆ ಮಾಡಲಾಗಿತ್ತು. ಕಾರ್ತಿ ಚಿದಂಬರಂ ಹೆಸರಿನಲ್ಲಿರುವ ಚೆಸ್ ಮ್ಯಾನೇಜ್ ಮೆಂಟ್ ಸರ್ವಿಸಸ್ ಸಂಸ್ಥೆಗೆ 3.5 ಕೋಟಿ ರೂಪಾಯಿ ನೀಡಲಾಗಿತ್ತು.

ಹಾಗಾಗಿ, 2007ರಲ್ಲಿ ಮಾರಿಷಸ್‍ನಿಂದ ಬಂಡವಾಳ ಪಡೆಯುವ ವೇಳೆ ಎಫ್ ಐಪಿಬಿ ನಿಯಮಾವಳಿ ಉಲ್ಲಂಘನೆ ಮಾಡಲಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಇ ಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದೆ. ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಪಿ. ಚಿದಂಬರಂ ಕುಟುಂಬವು ಒಟ್ಟು ಹತ್ತು ಹಗರಣಗಳನ್ನು ಎದುರಿಸುತ್ತಿದ್ದು, ಅದರಲ್ಲಿ ಇದೀಗ ಈ ಹಗರಣ ಸಾಬಿತಾಗಿ ಪಿ. ಚಿದಂಬರಂ ಮಗಾ ಪೊಲೀಸರ ಅಥಿತಿಯಾಗಿದ್ದಾರೆ.

– ಅಲೋಖಾ

Tags

Related Articles

Close