ಪ್ರಚಲಿತ

ಕರ್ನಾಟಕದ ಕಾಂಗ್ರೆಸ್ ಆಡಳಿತದಲ್ಲಿ ದೇಶ ವಿರೋಧಿ ಕೃತ್ಯಗಳು ಹೆಚ್ಚುತ್ತಿವೆ: ಪ್ರಲ್ಹಾದ ಜೋಶಿ

ಕರ್ನಾಟಕದ ಹೃದಯ ಭಾಗ ಬೆಂಗಳೂರಿನಲ್ಲಿ ಹಿಂದೂಗಳ ಮೇಲೆ ಮು#ಸ್ಲಿಂ ಯುವಕರು ಪುಂಡಾಟ ಮೆರೆದ ವಿಷಯ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಬನಶಂಕರಿಯ ಬಳಿ ಮಸೀದಿಯಲ್ಲಿ ಆಜಾನ್ ತೂಗುವ ಸಮಯದಲ್ಲಿ ಮೊಬೈಲ್ ಶಾಪ್ ಒಂದರಲ್ಲಿ ಹನುಮಾನ್ ಚಾಲೀಸಾ ಕೇಳುತ್ತಿದ್ದು, ಈ ಕಾರಣಕ್ಕೆ ಅಶಾಂತಿದೂತರು ಆ ಮೊಬೈಲ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದರು. ಈ‌ ದೃಶ್ಯಾವಳಿಗಳು ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿತ್ತು. ಸಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿದ್ದ ಈ ಘಟನೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ‌ ವ್ಯಕ್ತವಾಗಿತ್ತು.

ಅದಾದ ಬಳಿಕ ಸಂಸದ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ಹಿಂದೂ ಯುವ ಪಡೆ ಈ ದಾಂಧಲೆ ನಡೆಸಿದ ಪುಂಡರ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ಆ ಮೂಲಕ ಹಿಂದೂಗಳ ಶಕ್ತಿ ಏನು ಎಂಬುದನ್ನು ತೋರಿಸುವ ಕೆಲಸವನ್ನು ಹಿಂದೂ ಪಡೆ ಮಾಡಿತ್ತು ಎಂದರೂ ಅತಿಶಯವಾಗದೇನೋ.

ಈ ಘಟನೆಗೆ ಸಂಬಂಧಿಸಿದ ಹಾಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮಾತನಾಡಿದ್ದು, ಕರ್ನಾಟಕದಲ್ಲಿ ಹಿಂದೂ ವಿರೋಧಿ, ದೇಶ ವಿರೋಧಿ ಕೃತ್ಯಗಳು ಹೆಚ್ಚಾಗುತ್ತಿವೆ. ಇಂತಹ ಎಲ್ಲಾ ದುಷ್ಕೃತ್ಯಗಳಿಗೂ ರಾಜ್ಯದ ಕಾಂಗ್ರೆಸ್ ಸರ್ಕಾರ ನೇರ ಹೊಣೆ ಎಂದು ಅವರು ಕೆಂಡ ಕಾರಿದ್ದಾರೆ.

ರಾಜ್ಯದಲ್ಲಿನ ಕಾಂಗ್ರೆಸ್ ಆಡಳಿತದಲ್ಲಿ ಹಿಂದೂ ವಿರೋಧಿ ಕೃತ್ಯಗಳು ಹೆಚ್ಚಾಗುತ್ತಿರುವುದು ಯಾತಕ್ಕಾಗಿ ನಡೆಯುತ್ತಿವೆ. ಇದಕ್ಕೆ ಕಾರಣ ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಲ್ಪಸಂಖ್ಯಾತರ ವಿರುದ್ಧ ತಾಳುತ್ತಿರುವ ಮೃದು ಧೋರಣೆಯೇ, ರಾಜ್ಯದಲ್ಲಿ ಹಿಂದೂಗಳ ಮೇಲೆ ಇಂತಹ ದುಷ್ಕೃತ್ಯಗಳು ನಡೆಯಲು ಕಾರಣ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರು ಈ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುವ ಮೂಲಕ ದೇಶಕ್ಕೆ ದ್ರೋಹ ಎಸಗಿದ್ದರು. ಈ ಬಗ್ಗೆ ಎಫ್ ಎಸ್ ಎಲ್ ವರದಿ ಬಂದಿದ್ದರೂ ಸಹ ಈ ವರೆಗೂ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಸ್ಪೋಟ ನಡೆಯಿತು. ಆದರೂ ಕೈ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಹನುಮಾನ್ ಚಾಲೀಸ ಹಾಕಿದ್ದಕ್ಕಾಗಿ ಹಿಂದೂಗಳ ಮೇಲೆ ಮುಸ್ಲಿಂ ಪುಂಡರು ಪಲ್ಲೆ ನಡೆಸಿದ್ದಾರೆ. ಇವೆಲ್ಲಕ್ಕೂ ರಾಜ್ಯದ ಕಾಂಗ್ರೆಸ್ ಸರ್ಕಾರದ ಅಸಮರ್ಥ ಆಡಳಿತವೇ ಕಾರಣ ಎಂದು ಜೋಶಿ ನುಡಿದಿದ್ದಾರೆ.

Tags

Related Articles

Close