X
    Categories: ದೇಶ

ಮೋದಿಜೀಯ ಹತ್ಯೆಗೆ ಸ್ಕೆಚ್ ಹಾಕಿದ್ದ ಕಾಂಗ್ರೆಸ್‌ ಮುಖಂಡ‌ ಅಂದರ್!

ಮಧ್ಯಪ್ರದೇಶ‌ದ ಕಾಂಗ್ರೆಸ್ ನಾಯಕ ‘ಪ್ರಧಾನಿ ಮೋದಿ ಅವರನ್ನು ಕೊಲ್ಲಲು ಸಿದ್ಧರಾಗಿ’ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸಲಾಗಿದೆ.

ಮಧ್ಯಪ್ರದೇಶ‌ದ ಕಾಂಗ್ರೆಸ್ ಪಕ್ಷದ ನಾಯಕ ರಾಜಾ ಪಟೇರಿಯಾ ಎಂಬವರು ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ಸಿದ್ಧರಾಗಿ’ ಎಂದು ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದ್ದರು. ಸಂವಿಧಾನ‌ವನ್ನು ಉಳಿಸುವುದಕ್ಕೆ ಪ್ರಧಾನಿ ಮೋದಿ ಅವರನ್ನು ಕೊಲ್ಲಲು ಸಿದ್ಧರಾಗಿ ಎಂದು ಕರೆ ನೀಡಿದ್ದರು. ಹೀಗೆ ಜನರನ್ನು ತಪ್ಪು ದಾರಿಯಲ್ಲಿ ನಡೆಯಲು ಪ್ರೇರೇಪಣೆ ನೀಡಿದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶ‌ದ ಸರ್ಕಾರ ಮಾಜಿ ಸಚಿವ ಪಟೇರಿಯಾ ವಿರುದ್ಧ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೂ ಆದೇಶವನ್ನು ನೀಡಿತ್ತು.

ಈ ಹಿನ್ನೆಲೆಯಲ್ಲಿ ಪಟೇರಿಯಾ ಅವರನ್ನು ವಶಕ್ಕೆ ಪಡೆಯಲಾಗಿದೆ. ಪನ್ನಾದ ಪವಾಯಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ವನಿವಾಸದಿಂದ ಅವರನ್ನು ಬಂಧಿಸಲಾಗಿದೆ.

ಅವರು, ಪ್ರಧಾನಿ ಮೋದಿ ಅವರು ಚುನಾವಣೆ‌ಯನ್ನು ಕೊನೆಗೊಳಿಸುತ್ತಾರೆ. ಅವರು ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ಜನರನ್ನು ವಿಭಜಿಸುತ್ತಾರೆ. ದೇಶದಲ್ಲಿ ದಲಿತರು, ಬುಡಕಟ್ಟು ಜನರು, ಅಲ್ಪಸಂಖ್ಯಾತ‌ರ ಜೀವನ ಅಪಾಯದಲ್ಲಿದೆ. ಸಂವಿಧಾನ‌ವನ್ನು ಉಳಿಸಬೇಕಾದರೆ, ಪ್ರಧಾನಿ ಮೋದಿ ಅವರನ್ನು ಕೊಲ್ಲಲೂ ಸಿದ್ಧರಾಗಿ ಎಂದು ನಾಲಿಗೆ ಹರಿಯಬಿಟ್ಟಿದ್ದರು. ಇದೀಗ ಪೊಲೀಸರ ಅತಿಥಿ‌ಯಾಗಿದ್ದಾರೆ.

Post Card Balaga:
Related Post