ಪ್ರಚಲಿತ

ಹಿಂದೂ ಫೈರ್ ಬ್ರಾಂಡ್ ಯೋಗಿ ಆದಿತ್ಯನಾಥರಿಗೆ ಅವಾಚ್ಯ ಶಬ್ಧದಿಂದ ನಿಂದನೆ!! ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಗುಂಡಿ ತೋಡಿದ ದಿನೇಶ್ ಗುಂಡೂರಾವ್!!

ಭಾರತೀಯ ಜನತಾ ಪಾರ್ಟಿಯ ವಿರುದ್ಧ, ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಭಾಷಣ ಬಿಗಿಯುವ ಮೂಲಕವೇ ಫೇಮಸ್ ಆಗಿದ್ದ ದಿನೇಶ್ ಗುಂಡೂರಾವ್ ಇದೀಗ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ!! ರಾಜ್ಯದಲ್ಲಿ ಚುನಾವಣೆ ಕಣ ರಂಗೇರುತ್ತಿದ್ದಂತೆ ಮೋದಿ ಹಾಗೂ ಅಮಿತ್ ಶಾ ಭೇಟಿ ಹೆಚ್ಚುತ್ತಲೇ ಇರುವುದರ ಜೊತೆಗೆ ಹಿಂದೂ ಫೈರ್ ಬ್ರಾಂಡ್ ಖ್ಯಾತಿಯ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಹವಾ ಕರ್ನಾಟಕದಲ್ಲಿ ಹೆಚ್ಚುತ್ತಲೇ ಇರುವುದು ರಾಜ್ಯ ಕಾಂಗ್ರೆಸ್ಸಿಗರ ಪಾಲಿಗೆ ನುಂಗಲಾರದ ತುತ್ತಾಗಿದ್ದು, ಇದೀಗ ಕಾಂಗ್ರೆಸ್ ನಾಯಕರು ಬಿಜೆಪಿಗರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಸುದ್ದಿಯಾಗುತ್ತಿದ್ದಾರೆ!!

ಇತೀಚೆಗಷ್ಟೇ ದಿನೇಶ್ ಗುಂಡೂರಾವ್, ಪ್ರಧಾನಿ ಮೋದಿ ಅವರು ಸೀದಾ ರುಪಯ್ಯ ಸರ್ಕಾರ್ ಎಂದು ಲೇವಡಿ ಮಾಡಿದ್ದನ್ನು ಪ್ರಸ್ತಾಪಿಸಿ, ನಮೋ ಎಂದರೆ ನಮಗೆ ಮೋಸ ಎಂದರ್ಥ. ನರೇಂದ್ರ ಮೋದಿ ಅವರೇ, ರೈತರಿಗೆ, ಯುವಕರಿಗೆ, ಎಲ್ಲರಿಗೂ ಮೋಸ ಮಾಡೋದು ನಿಲ್ಲಿಸಿ. ಕೆಲಸ ಮಾಡಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಸುದ್ದಿಯಲ್ಲಿದ್ದರು!! ಅಷ್ಟೇ ಅಲ್ಲದೇ, “ಸಂವಿಧಾನವನ್ನು ಬದಲಾಯಿಸಲು ನಾವು ಬಂದಿರುವುದು” ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, “ಹಿಂದೂ ಎಂದು ಹೇಳಲು ಅನಂತ್ ಕುಮಾರ್ ನಾಲಾಯಕ್” ಎಂದು ವಾಗ್ದಾಳಿ ನಡೆಸಿ ಸುದ್ದಿಯಾಗಿದ್ದರು.

ಆದರೆ ಇದೀಗ ಬೆಂಗಳೂರಿನ ಮೌರ್ಯ ಸರ್ಕಲ್ ನ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಾಕ್ಷ ದಿನೇಶ್ ಗುಂಡೂರಾವ್ ,ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ ಈ ಬಾರಿ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ “ಅವನು ಯೋಗಿ ಆದಿತ್ಯ ನಾಥ್ ಅಲ್ಲ, ಢೋಂಗಿ ಆದಿತ್ಯ ನಾಥ್. ಮುಖ್ಯಮಂತ್ರಿ ಸ್ಥಾನದಲ್ಲಿ ಇರೋದಕ್ಕೆ ಅವನು ನಾಲಾಯಕ್. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವನನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕು ಎಂದು ಏಕವಚನದಲ್ಲಿಯೇ” ನಿಂದಿಸಿ ಇದೀಗ ಜನರ ಆಕ್ರೋಶಕ್ಕೆ ತುತ್ತಾಗಿದ್ದಾರೆ!!

ಜಮ್ಮು ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಘಟನೆಯನ್ನು ಖಂಡಿಸಿ ಮೌರ್ಯ ವೃತ್ತದಲ್ಲಿ ಶನಿವಾರ ಮೋಂಬತ್ತಿ ಬೆಳಗಿಸಿ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, “ಮೋಸಗಾರ, ಸುಳ್ಳುಗಾರ ಯೋಗಿ ಮತ್ತೊಮ್ಮೆ ರಾಜ್ಯಕ್ಕೆ ಬಂದರೆ ಬುದ್ಧಿ ಕಲಿಸುತ್ತೇವೆ” ಎಂದು ಕಿಡಿಕಾರಿರುವ ದಿನೇಶ್ ಗುಂಡೂರಾವ್, “ಅವನು ಕರ್ನಾಟಕಕ್ಕೆ ಬಂದ್ರೆ ನಾಡಿಗೆ ಅಪಮಾನ ವಾಗುತ್ತೆ… ಅವನು ಏನಾದ್ರು ಮತ್ತೆ ಕರ್ನಾಟಕಕ್ಕೆ ಬಂದ್ರೆ ಚಪ್ಪಲಿಯಲ್ಲಿ ಹೊಡೆಯಿರಿ. ಅವರ ಎಂಎಲ್ ಎ ಅತ್ಯಾಚಾರ ಮಾಡಿದ್ರೂ ಕ್ರಮ ತೆಗೆದುಕೊಂಡಿಲ್ಲ. ಮತ್ತೊಮ್ಮೆ ಯೋಗಿ ರಾಜ್ಯಕ್ಕೆ ಬಂದರೆ ಬುದ್ಧಿಕಲಿಸುತ್ತೇವೆ” ಎಂದು ದಿನೇಶ್ ಗುಂಡೂರಾವ್ ಗುಡುಗಿದ್ದಾರೆ!! ವಿಪರ್ಯಾಸವೆಂದರೆ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಕೈಗೊಂಡಿರುವ ದಿಟ್ಟ ಕ್ರಮಗಳಿಂದಾಗಿ ಇಂದು ಉತ್ತರಪ್ರದೇಶವು ಕೊಂಚ ಮಟ್ಟಿಗೆ ಸುಧಾರಣೆಯನ್ನು ಕಂಡಿದೆ ಎಂದರೆ ಅದು ಯೋಗಿ ಆದಿತ್ಯನಾಥರಿಂದ ಎನ್ನುವುದು ಬಹುಶಃ ಗುಂಡೂರಾವ್ ಅವರಿಗೆ ಗೊತ್ತಿಲ್ಲ ಎಂದನಿಸುತ್ತೆ!!

ಎಲುಬಿಲ್ಲದ ನಾಲಗೆ ಅದೇನೂ ಬೇಕಾದರೂ ನುಡಿಯುತ್ತೆ ಅನ್ನೋದಕ್ಕೆ ಕೆಪಿಸಿಸಿ ಕಾರ್ಯಾಧ್ಯಾಕ್ಷ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆಯೇ ಸೂಕ್ತ ಉದಾಹರಣೆಯಾಗಿದ್ದು, ಜನಮಾನಸದಲ್ಲಿ ತನ್ನ ಹೆಸರು ಅಚ್ಚಲಿಯಾಗಿ ಉಳಿಯಬೇಕು ಎನ್ನುವ ಹಿತದೃಷ್ಟಿಯಿಂದ ಬಿಜೆಪಿ ನಾಯಕರ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ವಿವಾದತ್ಮಾಕ ಹೇಳಿಕೆ ನೀಡುತ್ತಾ ಸುದ್ದಿಯಾಗುತ್ತಿರುವ ಇವರು ಇದೀಗ ಯೋಗಿ ಆದಿತ್ಯನಾಥ್ ವಿರುದ್ಧವು ವಾಗ್ಧಾಳಿ ನಡೆಸಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ!!

Image result for dinesh gundu rao with yogi adityanath

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ. ಅಷ್ಟೇ ಅಲ್ಲದೇ ಯೋಗಿ ಆದಿತ್ಯನಾಥ್ ಅಲ್ಲ, ಡೋಂಗಿ ಆದಿತ್ಯನಾಥ್ ಎಂದು ದಿನೇಶ್ ಗುಂಡೂರಾವ್ ಅಪಹಾಸ್ಯ ಮಾಡಿದ್ದು, ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. “ಉತ್ತರ ಪ್ರದೇಶ ಸಿಎಂ ಬಗ್ಗೆ ಹಾಸ್ಯಾಸ್ಪದವಾಗಿ, ಅವಹೇಳನಕಾರಿ ಹೇಳಿಕೆ ನೀಡಿರುವ ದಿನೇಶ್ ಗುಂಡೂರಾವ್ ಬಂಧನವಾಗಬೇಕು” ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ತಾನೂ ರಾಜಕೀಯ ರಂಗದಲ್ಲಿದ್ದೇನೆಂದು ತೋರ್ಪಡಿಸುವ ಸಲುವಾಗಿ ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಸುದ್ದಿಯಾಗುತ್ತಿರುವ ಕೆಪಿಸಿಸಿ ಕಾರ್ಯಾಧ್ಯಾಕ್ಷ ದಿನೇಶ್ ಗುಂಡೂರಾವ್ ಇದೀಗ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಜನರ ಆಕ್ರೋಶಕ್ಕೆ ತುತ್ತಾಗಿದ್ದಂತೂ ಅಕ್ಷರಶಃ ನಿಜ!!

ಮೂಲ: http://www.prajavani.net/news/article/2018/04/15/566046.html

– ಅಲೋಖಾ

Tags

Related Articles

Close