ಪ್ರಚಲಿತ

ದತ್ತಪೀಠ ವಿವಾದಕ್ಕೆ ಮುಕ್ತಿ ಹಾಡಲು ಕೊನೆಯ ಹಂತ ಮಾತ್ರ ಬಾಕಿ! ಹಿಂದುತ್ವದ ಸಿದ್ಧಾಂತವನ್ನು ಎತ್ತಿ ಹಿಡಿದ ಬಿಜೆಪಿ!

ದತ್ತ ಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಕ ಮಾಡಲು ಅನುಮತಿ ನೀಡುವ ಮೂಲಕ ಹಿಂದೂಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.

ದತ್ತ ಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿ, ಹಿಂದೂ ಸಂಘಟನೆಗಳು ಬಹು ಸಮಯದಿಂದ ಸರ್ಕಾರ‌ಕ್ಕೆ ಮನವಿ ಮಾಡುತ್ತಿದ್ದವು. ಈ ಮನವಿಗೆ ಸ್ಪಂದಿಸಿರುವ ಸರ್ಕಾರ ಇದೀಗ ಇತಿಹಾಸ‌ದಲ್ಲಿಯೇ ಪ್ರಥಮ ಬಾರಿಗೆ ಎಂಬಂತೆ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾ‌ಗೆ ತಾತ್ಕಾಲಿಕ ನೆಲೆಯಲ್ಲಿ ಇಬ್ಬರು ಅರ್ಚಕರನ್ನು ನೇಮಿಸುವುದಕ್ಕೆ ಅನುಮತಿಯನ್ನು ನೀಡಿದೆ.

ಸರ್ಕಾರ‌ರದ ಈ ನೀತಿ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ‌ಗೆ ಸಂತಸ ನೀಡಿದೆ.

ಈ ಹಿಂದೆ 2018 ರ ಚುನಾವಣಾ ಸಮಯದಲ್ಲಿ ಬಿಜೆಪಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ದತ್ತ ಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಕ ಮಾಡುವ ಭರವಸೆಯನ್ನು ನೀಡಿತ್ತು. ಈ ಭರವಸೆಯನ್ನು ಇದೀಗ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಈಡೇರಿಸಿದ್ದು, ಅದರಂತೆ ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆ‌ಗೆ ಸಾರ್ವಜನಿಕ ವಲಯದಲ್ಲಿ ಪಾತ್ರವಾಗಿದೆ.

Tags

Related Articles

Close