X

ಮತ್ತೊಮ್ಮೆ ಕರುನಾಡಿಗೆ ನಮೋ: ಗಂಡು ಮೆಟ್ಟಿದ ನಾಡಿನಲ್ಲಿ ಮೊಳಗಿದೆ ಮೋದಿ ಉದ್ಘೋಷ!

ಜನವರಿ ೧೨ ರಂದು ಕೇಸರಿ ಸಂತ ಸ್ವಾಮಿ ವಿವೇಕಾನಂದರ ಜಯಂತಿ. ದೇಶದೆಲ್ಲೆಡೆ ಸಂಭ್ರಮ, ಸಡಗರದಿಂದ ಆಚರಣೆ ಮಾಡಲಾಗುತ್ತದೆ. ರಾಷ್ಟೀಯ ಯವಜನೋತ್ಸವ‌ವನ್ನು ಯುವ ದಿನದ ಅಂಗವಾಗಿ ನಡೆಸುವ ಮೂಲಕ ದೇಶದ ಮೂಲೆ ಮೂಲೆಗೂ ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ತಲುಪಿಸುವ ಕೆಲಸ ನಡೆಯುತ್ತಿದೆ.

ಅಂದ ಹಾಗೆ ಈ ಬಾರಿ ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಹಿನ್ನೆಲೆಯಲ್ಲಿ ಜನವರಿ ೧೨ ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾಷ್ಟ್ರೀಯ ಯುವದಿನದ ಯುವಜನೋತ್ಸವದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ಪ್ರಧಾನಿ ಮೋದಿ ಅವರೇ ಜನರಿಗೆ ತಲುಪಿಸುವ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಲಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮುಂದಾಳತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವು ಇಡೀ ದೇಶಕ್ಕೆ ಸಂಬಂಧಿಸಿದಂತೆ ಪ್ರಮುಖ ಕಾರ್ಯಕ್ರಮವಾಗಿದ್ದು, ಇದನ್ನು ಕರ್ನಾಟಕದ ಪ್ರಮುಖ ನಗರ ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದರ ಕೀರ್ತಿ ಪ್ರಲ್ಹಾದ ಜೋಶಿ ಅವರಿಗೆಯೇ ಸಲ್ಲಬೇಕು. ಈ ಕಾರ್ಯಕ್ರಮದ ಮೂಲಕ ಮತ್ತೆ ಹುಬ್ಬಳ್ಳಿ, ಕರ್ನಾಟಕ ರಾಜ್ಯವನ್ನು ದೇಶದೆದುರು ತೆರೆದಿಡುವ ಕಾರ್ಯ ಮಾಡುತ್ತಿರುವ ಪ್ರಧಾನಿ ಜೋಶಿ ಅವರ ಈ ನಡೆ ಶ್ಲಾಘನೀಯ, ಮಾದರಿ.

Post Card Balaga:
Related Post