ಪ್ರಚಲಿತ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಿಸಲು ಕಾರ್ಯಕರ್ತರಲ್ಲಿ ಜೋಶಿ ಮನವಿ

ಇನ್ನೇನು ಕೆಲವೇ ಸಮಯದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳೂ ತಮ್ಮ ಪಕ್ಷದ ಪರ ಭರ್ಜರಿ ಪ್ರಚಾರವನ್ನು ಈಗಾಗಲೇ ಆರಂಭಿಸಿವೆ. ಈ ಬಾರಿ ಹೇಗಾದರೂ ಮಾಡಿ ಕೇಂದ್ರದಲ್ಲಿ ಅಧಿಕಾರ ಹಿಡಿಯಬೇಕು ಎಂದು ಇನ್ನಿಲ್ಲದ ಸರ್ಕಸ್ ಮಾಡುತ್ತಿವೆ.

ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಹಾಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿದ್ದು, ಪ್ರಧಾನಿ ಮೋದಿ ಅವರು ಈ ಚುನಾವಣೆಗೆ ಸಂಬಂಧಿಸಿದ ಹಾಗೆ ನೀಡಿದ ಟಾರ್ಗೆಟ್ ತಲುಪುವ ನಿಟ್ಟಿನಲ್ಲಿ ಬಿಜೆಪಿಯ ಎಲ್ಲರೂ ಶಕ್ತಿ ಮೀರಿ ಕಾರ್ಯ ನಿರ್ವಹಿಸಬೇಕು. ಪ್ರಧಾನಿ ಮೋದಿ ಅವರನ್ನು ಮುಂದಿನ ಬಾರಿಯೂ ಪ್ರಧಾನಿ ಪಟ್ಟಕ್ಕೆ ಸೇರಿಸಲು ನಾವೆಲ್ಲರೂ ಶ್ರಮ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರತಿ ಬೂತ್‌ಗಳಿಗೆ ಸಂಬಂಧಿಸಿದ ಹಾಗೆಯೂ ಪ್ರಧಾನಿ ಮೋದಿ ಅವರು ನೀಡಿದ ಗುರಿ ತಲುಪುವ ನಿಟ್ಟಿನಲ್ಲಿ ಕೆಲಸವಾಗಬೇಕು‌. ಹಿಂದಿನ ಚುನಾವಣೆಯಲ್ಲಿ ಪಡೆದ ಮತಗಳಿಗಿಂತ ಹೆಚ್ಚು ಮತ ಪಡೆದು ನಮ್ಮ ಸರ್ಕಾರ ಮತ್ತೆ ಆಡಳಿತ ವಹಿಸಲು ನಾವೆಲ್ಲರೂ ಕೆಲಸ ಮಾಡಬೇಕಾಗಿದೆ. ಪ್ರಧಾನಿ ಮೋದಿ ಅವರ ಕನಸನ್ನು ಸಾಕಾರಗೊಳಿಸಲು ಪಕ್ಷದ ಎಲ್ಲಾ ಕಾರ್ಯಕರ್ತರು ಉತ್ಸಾಹದಿಂದ ಕಾರ್ಯ ನಿರ್ವಹಿಸಬೇಕಿದೆ ಎಂದಿದ್ದಾರೆ.

ಹಾಗೆಯೇ ನಾನು ಕಳೆದ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಪಕ್ಷದ ಕಾರ್ಯಕರ್ತರು ಮತ್ತು ಮತದಾರರ ವಿಶ್ವಾಸಕ್ಕೆ ಧಕ್ಕೆ ಮಾಡುವ ಕಾರ್ಯ ಎಸಗಿಲ್ಲ. ಈ ನಂಬಿಕೆ ವಿಶ್ವಾಸವನ್ನು ಮುಂದೆಯೂ ಉಳಿಸಿಕೊಂಡು ಹೋಗುತ್ತೇನೆ. ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಹಲವಾರು ಕೆಲಸಗಳನ್ನು ಮಾಡಿರುವುದಾಗಿಯೂ ಜೋಶಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ಅವಧಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಈ ಕಾರಣದಿಂದಲೂ ಬಿಜೆಪಿ ದೊಡ್ಡ ಮಟ್ಟದಲ್ಲಿ ಜಯ ಸಾಧಿಸಲಿದೆ. ಕೇಂದ್ರ ಸರ್ಕಾರ ಬಡತನ ನಿರ್ಮಾಲನೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ‌. ಸ್ವಾವಲಂಬಿ ಜೀವನ ನಡೆಸಲು ಬೇಕಾದ ಅನುಕೂಲತೆಗಳು, ದಾರಿಗಳನ್ನು ಸಹ ಕೇಂದ್ರದ ಪ್ರಧಾನಿ ಮೋದಿ ಸರ್ಕಾರ ಮಾಡಿ ತೋರಿಸಿದೆ ಎಂದೂ ಆವರು ತಿಳಿಸಿದ್ದಾರೆ.

Tags

Related Articles

Close