ಪ್ರಚಲಿತ

ಯೋಗಿಗಾಗಿ ನಮಾಜ್ ಸಮಯವನ್ನೇ ಬದಲಾಯಿಸಿದ ಮುಸ್ಲಿಮರು!! ಸೌಹಾರ್ದತೆಗೆ ಸಾಕ್ಷಿಯಾಗಿದೆ ಉತ್ತರ ಪ್ರದೇಶ!!

ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಅಧಿಕಾರ ಸ್ವೀಕರಿಸಿದಂದಿನಿಂದಲೂ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇದ್ದು, ಕರ್ತವ್ಯದ ಮೇಲಿನ ಬದ್ಧತೆ, ರಾಜಕೀಯ ನಿಷ್ಠೆ ಹಾಗೂ ಧರ್ಮದ ಪರಿಪಾಲನೆಯಲ್ಲೇ ಹೆಸರುವಾಸಿಯಾಗಿರುವ ಇವರು, ತಾವು ಕೈಗೊಂಡಿರುವ ತುಷ್ಟೀಕರಣವಲ್ಲದ ನಿರ್ಧಾರಗಳು ಇದೀಗ ಹೊಸ ವಾತಾವರಣ ಸೃಷ್ಟಿ ಮಾಡುತ್ತಿದೆ ಎಂದರೆ ನಂಬ್ತೀರಾ?? ಅದರಲ್ಲೂ ಮುಸ್ಲಿಮರು ಯೋಗಿಗಾಗಿ ನಮಾಜ್ ಸಮಯವನ್ನೇ ಬದಲಾಯಿಸಿದರು ಎಂದರೆ ಅದು ನಿಜಕ್ಕೂ ಕೂಡ ಹೆಮ್ಮೆಯ ವಿಚಾರ!!

ಫೈರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥರು 2017ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಜಾರಿಗೆ ತಂದ ಪ್ರಮುಖ ಯೋಜನೆಗಳು, ತೆಗೆದುಕೊಂಡ ದಿಟ್ಟ ನಿರ್ಧಾರಗಳು ಇಡೀ ಉತ್ತರ ಪ್ರದೇಶವನ್ನಲ್ಲದೇ, ಈಡೀ ದೇಶದಲ್ಲಿ ಬಾರೀ ಸಂಚಲನವನ್ನು ಉಂಟು ಮಾಡಿತ್ತು!! ಅಷ್ಟೇ ಅಲ್ಲದೇ, ಪ್ರತೀ ಬಾರಿ ಯೋಗಿ ಆದಿತ್ಯನಾಥರು ಕೋಮುವಾದಿ, ಮುಸ್ಲಿಂ ವಿರೋಧಿ ಎಂದು ಬೊಬ್ಬೆ ಹಾಕುತ್ತಿರುವವರು ಮುಸ್ಲಿಮರ ಏಳಿಗೆಗೆ ಮಾಡುವ ಕಾರ್ಯಗಳನ್ನು ಮಾತ್ರ ಯಾರೂ ಕೂಡ ಶ್ಲಾಘಿಸುವುದೇ ಇಲ್ಲ.

ಹೌದು…. ಈಗಾಗಲೇ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡಾಗಿನಿಂದ ಆ ರಾಜ್ಯದ ಸಂಪೂರ್ಣ ಚಿತ್ರಣವೇ ಬದಲಾಗುತ್ತಿದೆಯಲ್ಲದೇ, ರಾಜ್ಯದಲ್ಲಿದ್ದ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಅಪರಾಧಿಗಳನ್ನು ಸದೆ ಬಡೆಯುತ್ತಿದ್ದಾರಲ್ಲದೇ ಸರ್ವರಿಗೂ ಸಮಾನತೆ ನೀಡುವ ಮೂಲಕ ತುಷ್ಟೀಕರಣ ರಾಜಕಾರಣಕ್ಕೆ ಬ್ರೇಕ್ ಹಾಕಿದ್ದಾರೆ. ಇದರಿಂದ ಇದೀಗ ಉತ್ತರ ಪ್ರದೇಶದ ಮುಸ್ಲಿಂ ಧರ್ಮಗುರುಗಳು ಸೌಹಾರ್ದತೆ ಮೆರೆದಿದ್ದಾರೆ ಎಂದರೆ ಅದು ನಿಜಕ್ಕೂ ಕೂಡ ಗ್ರೇಟ್!!

Related image

ಯೋಗಿ ಆದಿತ್ಯನಾಥರು ಈಗಾಗಲೇ ಮುಸ್ಲಿಮರ ಏಳಿಗೆಗಾಗಿ ಸಾಕಷ್ಟು ಕಾರ್ಯಗಳನ್ನು ಜಾರಿ ತಂದಿದ್ದಲ್ಲದೇ ಉತ್ತರ ಪ್ರದೇಶದಲ್ಲಿ ಮದರಸಾಗಳನ್ನು ಆಧುನೀಕರಣಗೊಳಿಸಲು ಮುಂದಾಗಿರುವ ವಿಚಾರ ತಿಳಿದೇ ಇದೆ. ಇದರಿಂದ ಲಕ್ಷಾಂತರ ಮುಸ್ಲಿಮರು ಮದರಸಾಗಳಲ್ಲಿ ಗುಣಮಟ್ಟದ ಹಾಗೂ ಆಧುನಿಕ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ರಾಜ್ಯದ 8 ಸಾವಿರಕ್ಕೂ ಅಧಿಕ ಮದರಸಾಗಳನ್ನು ಆಧುನೀಕರಣಗೊಳಿಸಲು ಈ ಹಿಂದೆ ತೀರ್ಮಾನಿಸಿದ್ದರು!!

ಅಷ್ಟೇ ಅಲ್ಲದೇ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಆನ್ ಲೈನ್ ಪೆÇೀರ್ಟಲ್ ನಲ್ಲಿ 16,705 ಮದರಸಾಗಳು ನೋಂದಣಿಯಾಗಿದ್ದು, ಇವುಗಳಲ್ಲಿ 8,184 ಮದರಸಾಗಳ ಆಧುನೀಕರಣಕ್ಕಾಗಿ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಲು ನಿರ್ಧರಿಸಿತ್ತು!! ಕೇಂದ್ರದ ಅನುದಾನ ಲಭ್ಯವಾದರೆ ಮದರಸಾಗಳಲ್ಲಿ ಆಧುನಿಕ ಶಿಕ್ಷಣ, ತಾಂತ್ರಿಕ ಕೌಶಲ ಸೇರಿ ಹಲವು ಚಟುವಟಿಕೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಆದರೆ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದಾಗಿನಿಂದ ಉತ್ತರ ಪ್ರದೇಶದಲ್ಲಿ ಮುಸ್ಲಿಮರನ್ನು ದೇಶವನ್ನೇ ಬಿಟ್ಟು ಓಡಿಸುತ್ತಾರೆ ಎಂಬ ಮಟ್ಟಕ್ಕೆ ಅಪಪ್ರಚಾರ ಮಾಡಲಾಗಿತ್ತು. ಆದರೆ ಯೋಗಿ ಆದಿತ್ಯನಾಥ್ ನಾನು ಹಿಂದೂ ರಕ್ಷಕ ಮುಸ್ಲಿಂ ವಿರೋಧಿಯಲ್ಲ ಎಂಬುದನ್ನು ತಮ್ಮ ಮಾತಿನಲ್ಲಷ್ಟೇ ಅಲ್ಲ ಕಾರ್ಯರೂಪಕ್ಕೂ ತಂದಿದ್ದಾರೆ. ಅಷ್ಟೇ ಅಲ್ಲದೇ, ಲಖನೌನಲ್ಲಿ ನಡೆದ ಒಂಬತ್ತು ರಾಜ್ಯಗಳ ಅಲ್ಪಸಂಖ್ಯಾತ ಕಲ್ಯಾಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಮದರಸಾಗಳನ್ನು ಮುಚ್ಚುವುದರಿಂದ ಸಮಸ್ಯೆಗೆ ಪರಿಹಾರ ದೊರೆಯುವುದಿಲ್ಲ. ಇಸ್ಲಾಂ ಶಿಕ್ಷಣ ಸಂಸ್ಥೆಗಳ ಜತೆಗೆ ಸಂಸ್ಕೃತ ಪಾಠಶಾಲೆಗಳು ಆಧುನಿಕ ಶಿಕ್ಷಣವನ್ನು ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಸೂಕ್ತ ಸ್ಪರ್ಧೆ ಎದುರಿಸಲು ಸಾಧ್ಯ ಎಂದು ಹೇಳಿದ್ದರು.

ಆದರೆ ಇದೀಗ ಉತ್ತರ ಪ್ರದೇಶದಲ್ಲಿ ಆದಿತ್ಯನಾಥರ ತುಷ್ಠೀಕರಣವಲ್ಲದ ನಿರ್ಧಾರಗಳಿಂದ ಮನೆ ಮಾತಾಗಿದ್ದು, ಅದಕ್ಕೆ ಉತ್ತಮ ನಿದರ್ಶನ ಎನ್ನುವಂತೆ ಮುಸ್ಲಿಂ ಧರ್ಮಗುರುಗಳು ಸೌಹಾರ್ದ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ!! ಹೌದು….. ಮಾರ್ಚ್ 2 ಉತ್ತರ ಪ್ರದೇಶದಲ್ಲಿ ನಡೆಯಲಿರುವ ಹೋಳಿ ಹಬ್ಬದ ನಿಮಿತ್ತ ಮುಸ್ಲಿಂ ಧರ್ಮಗುರುಗಳು ಅಸಫಿ (ಬಾದಾ) ಇಮಾಂಬರಾದಲ್ಲಿ ಶುಕ್ರವಾರ ನಡೆಯುವ ನಮಾಜ್ ಸಮಯವನ್ನು ಶಿಯಾ ಧರ್ಮ ಗುರುಗಳಾದ ಮೌಲಾನಾ ಕಲ್ಬೆ ಜವಾದ್ 30 ನಿಮಿಷ ಮುಂದೂಡುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.

Related image

ಯಾಕೆಂದರೆ, ಮಧ್ಯಾಹ್ನ ಬಣ್ಣದೋಕುಳಿ ಆಡುವ ಹಿಂದೂ ಬಾಂಧವರಿಗೆ ತೊಂದರೆಯಾಗಬಾರದು ಎಂದು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಸ್ಲಿಂ ಧರ್ಮ ಗುರು ಮೌಲಾನಾ ಕಲ್ಬೆ ಜವಾದ್ ತಿಳಿಸಿದ್ದಾರೆ. ಸಾಮಾನ್ಯವಾಗಿ 12-1 ಗಂಟೆಯವರೆಗೆ ನಡೆಯುವ ಶುಕ್ರವಾರದ ನಮಾಜ್ ಸಮಯವನ್ನು 12.45 ರಿಂದ 1.45ಕ್ಕೆ ಮುಂದೂಡಲಾಗಿದೆ. ಈ ಮೂಲಕ ಉತ್ತರ ಪ್ರದೇಶವು ಶಾಂತಿಯುತ ಜನಜೀವನಕ್ಕೆ ಮರಳುತ್ತಿದೆಯಲ್ಲದೇ ಸೌಹಾರ್ದತೆಯನ್ನು ಎತ್ತಿ ತೋರಿಸುತ್ತಿದೆ ಎನ್ನುವ ಮಾತುಗಳು ಇದೀಗ ಎಲ್ಲೆಡೆ ಕೇಳಿ ಬರುತ್ತಿದೆ!!

ಉತ್ತರ ಪ್ರದೇಶದಲ್ಲಿ ಸಂಭ್ರಮದ ಹೋಳಿ ಆಚರಿಸಲು ಮಧ್ಯಾಹ್ನ 12 ಗಂಟೆಯವರೆಗೂ ಅವಕಾಶವಿರುತ್ತದೆ. ಆದರೆ, ನಿಗದಿತ ಸಮಯ ಮೀರುವುದು ಸರ್ವೆ ಸಾಮಾನ್ಯ. ಈ ದೃಷ್ಟಿಯಿಂದ ಉಭಯ ಸಮುದಾಯಗಳ ಮಧ್ಯೆ ಕೋಮ ಸಾಮರಸ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನಮಾಜ್ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮೌಲಾನಾ ತಿಳಿಸಿದ್ದಾರೆ.

ಅಂತೂ ನಮಾಜ್ ಸಮಯ ಮುಂದೂಡುವ ಮೂಲಕ ಉತ್ತರ ಪ್ರದೇಶದ ಧರ್ಮಗುರುಗಳು ಸೌಹಾರ್ದತೆಯ ಹೊಸ ಶಕೆ ಆರಂಭಿಸಿದ್ದಾರೆ. ಅಷ್ಟೇ ಅಲ್ಲದೇ ಈ ಮೂಲಕ ಯೋಗಿ ಆದಿತ್ಯನಾಥ್ ಸರ್ಕಾರ, ಮುಸ್ಲಿಮರನ್ನು ದೇಶ ಬಿಟ್ಟು ಓಡಿಸುತ್ತಾರೆ ಎಂಬ ಅಪಪ್ರಚಾರಗಳಿಗೆ ಬ್ರೇಕ್ ಬಿದ್ದಂತಾಗಿದ್ದು, ಹಿಂದೂಗಳ ರಕ್ಷಣೆ ಮತ್ತು ಉತ್ತಮ ಭವಿಷ್ಯಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ಇವರು ಜನಪ್ರಿಯ ಮುಖ್ಯಮಂತ್ರಿಗಳಾಗಿ ಹೊರಹೊಮ್ಮುತ್ತಿರುವುದು ಮಾತ್ರ ಅಕ್ಷರಶಃ ನಿಜ!!

– ಅಲೋಖಾ

Tags

Related Articles

Close