ವಿಪರ್ಯಾಸವೆಂದರೆ, ಜವಾಹರ್ ಲಾಲ್ ನೆಹರೂ ಕಾಲದಿಂದಲೂ, ಶೇಖ್ ಅಬ್ದುಲ್ಲಾರಿಂದ ಒಮರ್ ಅಬ್ದುಲ್ಲಾವರೆಗೂ ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಪಾಕಿಸ್ತಾನದ ಪರ ಒಲವನ್ನು ತೋರುತ್ತಿರುವ ವಿಚಾರ ಗೊತ್ತೇ ಇದೆ!! ಅಷ್ಟೇ ಅಲ್ಲದೇ ದೇಶಕ್ಕೆ ಕಂಟಕನಾಗಿದ್ದ ಕಾಶ್ಮೀರದಲ್ಲಿ ಸೇನಾ ಪಡೆಯಿಂದ ಹತನಾಗಿದ್ದ ಭಯೋತ್ಪಾದಕ ಬುರ್ಹಾನ್ ವನಿಯನ್ನು ಇಡೀ ವಿಶ್ವವೇ ಭಯೋತ್ಪಾದಕ ಎಂದು ಒಮ್ಮತದ ಉತ್ತರವನ್ನು ನೀಡಿದರೂ ಕೂಡ, ಉಗ್ರ ಬುರ್ಹಾನ್ ವನಿಯನ್ನು ದೇಶಭಕ್ತ ಎನ್ನುವ ಹಾಗೆ ಬಿಂಬಿಸಿ ಆತನನ್ನು ಪೂಜಿಸುತ್ತಿದ್ದಾರೆ ಎಂದರೆ ಇವರಿಗೆ ಅದೇನೂ ಹೇಳಬೇಕೋ ನಾ ಕಾಣೆ!!
ಈಗಾಗಲೇ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಅಬ್ದುಲ್ ಮಜೀದ್, ಕಾಶ್ಮೀರದಲ್ಲಿ ಹತ್ಯೆಗೀಡಾಗಿರುವ ಬುರ್ಹಾನ್ ವನಿಯನ್ನು ಹುತಾತ್ಮರು ಎಂದು ಕರೆದಿರುವ ವಿಚಾರ ಗೊತ್ತೇ ಇದೆ!! ಆದರೆ ಇದೀಗ ಕಾಶ್ಮೀರದ ಕಣಿವೆಯಲ್ಲಿ ಪ್ರತ್ಯೇಕವಾದಿಗಳು ಮತ್ತು ಪಾಕ್ ಪೆÇೀಷಿತ ಭಯೋತ್ಪಾದಕರ ಉಪಟಳ ಮಿತಿ ಮೀರಿದ್ದು, ಮತ್ತೊಮ್ಮೆ ದೇಶವಿರೋಧಿ ವರ್ತನೆಯನ್ನು ಬಹಿರಂಗವಾಗಿ ತೋರಿದ್ದಾರೆ.
ಹೌದು…. ಕಳೆದ ವರ್ಷ ಭಾರತೀಯ ಸೈನಿಕರ ಗುಂಡಿಗೆ ಬಲಿಯಾಗಿದ್ದ ಭಯೋತ್ಪಾದಕ ಬುರ್ಹಾನ್ ವನಿಯನ್ನು ಆರಾಧಿಸುವ ಚಾಳಿಯನ್ನು ಪ್ರತ್ಯೇಕವಾದಿಗಳು ಮುಂದುವರಿಸಿದ್ದಾರೆ. ಕೆಲ ದಿನಗಳಿಂದ ನಡೆಯುತ್ತಿರುವ ಕಲ್ಲು ತೂರಾಟದ ವೇಳೆಯಲ್ಲಿ ಕೆಲವು ಭಯೋತ್ಪಾದಕರ ಬೆಂಬಲಿಗರು ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಸದಸ್ಯ, ಉಗ್ರ ಬುರ್ಹಾನ್ ವಾನಿ ಮತ್ತು ಪಾಕಿಸ್ತಾನದ ಭಾವಚಿತ್ರವಿರುವ ಟೀ ಶರ್ಟ್ ಗಳನ್ನು ಧರಿಸಿ, ಕಲ್ಲು ತೂರಾಟದಲ್ಲಿ ಭಾಗಿಯಾಗಿರುವ ಚಿತ್ರಗಳು ರಾಷ್ಟ್ರೀಯ ವಾಹಿನಿಯೊಂದಕ್ಕೆ ದೊರಕಿವೆ.
ಕಳೆದ ವರ್ಷ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಮುಖಂಡ ಬುರ್ಹಾನ್ ವನಿಯನ್ನು ರಕ್ಷಣಾ ಪಡೆ ಹತ್ಯೆಗೈದಿದ್ದವು, ಈ ಹಿನ್ನೆಲೆಯಲ್ಲಿ ಸುಮಾರು 5 ತಿಂಗಳಿಗೂ ಹೆಚ್ಚು ಸಮಯ ಹಿಂಸಾಚಾರ ಮತ್ತು ಪ್ರತಿಭಟನೆಗಳು ನಡೆದಿದ್ದವು. ತದನಂತರದ ವೇಳೆ ಈದ್ ನಂತರ ದಾಳಿ ನಡೆಸಲು ಸುಮಾರು 280 ಉಗ್ರರು ಕಾಯುತ್ತಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಸೂಕ್ತ ಭದ್ರತೆ ಕೈಗೊಳ್ಳಲಾಗಿತ್ತು!! ಇನ್ನು ಇತ್ತೀಚೆಗಷ್ಟೇ ಕಾಶ್ಮೀರದಲ್ಲಿ ಸೇನಾ ಪಡೆಯಿಂದ ಹತನಾಗಿದ್ದ ಭಯೋತ್ಪಾದಕ ಬುರ್ಹಾನ್ ವನಿ ಪರವಾಗಿ ಮಾತನಾಡುವ ಪಾಕಿಸ್ತಾನ ಈ ಬಾರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಬುರ್ಹಾನ್ ವನಿಗೆ ಗೌರವ ಸಲ್ಲಿಸುವುದಕ್ಕೆ ಬುರ್ಹಾನ್ ವನಿ ಕುರಿತಾಗಿ ಆನಿಮೇಟೆಡ್ ಸಿನಿಮಾ ಹೊರತರಲು ಸಿದ್ಧತೆ ನಡೆಸಿದ್ದು ಇದಕ್ಕಾಗಿ ಟೀಸರ್ ನ್ನು ಬಿಡುಗಡೆ ಮಾಡಿದೆ.
ಬುರ್ಹಾನ್ ವನಿ ಸನ್ ಆಫ್ ಕಾಶ್ಮೀರ ಎಂಬ ಸಿನಿಮಾದ ಟೀಸರ್ ನ್ನು ಜನವರಿ 1 ರಂದು ಬಿಡುಗಡೆ ಮಾಡಲಾಗಿದೆ. ರಾಣಾ ಅಬ್ರಾರ್ ಎಂಬ ಪಾಕಿಸ್ತಾನಿ ನಿರ್ದೇಶಕ ಬುರ್ಹಾನ್ ವನಿಯ ಕುರಿತಾದ ಸಿನಿಮಾ ನಿರ್ದೇಶಿಸಿದ್ದು, ಭಯೋತ್ಪಾದಕ ಬುರ್ಹಾನ್ ವನಿಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದ ಪಾಕಿಸ್ತಾನದ ವಿರುದ್ಧ ಭಾರತ ಅನೇಕ ಬಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಆದರೆ ಭಾರತದ ಭಾಗವೇ ಆಗಿರುವಂತಹ ಕಾಶ್ಮೀರದ ಕಣಿವೆಯಲ್ಲಿ ಪ್ರತ್ಯೇಕವಾದಿಗಳು ಮತ್ತು ಪಾಕ್ ಪೆÇೀಷಿತ ಭಯೋತ್ಪಾದಕರ ಉಪಟಳ ಮಿತಿ ಮೀರಿದ್ದು, ಅದನ್ನು ತಡೆಯಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಇದೆಲ್ಲದರ ಮಧ್ಯೆ ಕಂಗೆಟ್ಟಿರುವ ಪ್ರತ್ಯೇಕವಾದಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರವೃತ್ತಿ ಮುಂದುವರಿಸಿದ್ದು, ಯುವಕರ ತಲೆ ಕೆಡಿಸಿ ದ್ವೇಷದ ಬೀಜ ಬಿತ್ತುತ್ತಿದ್ದಾರೆ.
ಹಾಗಾಗಿ ಇದೀಗ ಉಗ್ರ ಬುರ್ಹಾನ್ ವಾನಿ ಮತ್ತು ಪಾಕಿಸ್ತಾನದ ಭಾವಚಿತ್ರವಿರುವ ಟೀ ಶರ್ಟ್ ಗಳನ್ನು ಧರಿಸಿ, ಕಲ್ಲು ತೂರಾಟದಲ್ಲಿ ಭಾಗಿಯಾಗಿರುವ ಚಿತ್ರಗಳು ರಾಷ್ಟ್ರೀಯ ವಾಹಿನಿಯೊಂದಕ್ಕೆ ದೊರಕಿವೆ. ಈ ಮೂಲಕ ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದಕ ಬುರ್ಹಾನ್ ವಾನಿಯನ್ನು ಮಹಾನ್ ಹೋರಾಟಗಾರನೆಂಬಂತೆ ಬಿಂಬಿಸಿ, ಯುವಕರನ್ನು ಸೆಳೆಯಲು ಪಾಕ್ ಮೂಲಕ ಭಯೋತ್ಪಾದಕ ಸಂಘಟನೆಗಳು ಮತ್ತು ಪ್ರತ್ಯೇಕವಾದದ ಹೆಸರಲ್ಲಿ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಪ್ರತ್ಯೇಕವಾದಿಗಳು ಪ್ರಯತ್ನಿಸುತ್ತಿರುವ ಅಂಶ ಸಾಬೀತಾಗಿದೆ.
ಈಗಾಗಲೇ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರಗಳಿಗೆ ಭಯಭೀತರಾಗಿರುವ ಉಗ್ರರು ಹಲವಾರು ಅಡ್ಡದಾರಿಗಳನ್ನು ಹಿಡಿದಿರುವುದಂತೂ ಅಕ್ಷರಶಃ ನಿಜ!! ಅಲ್ಲದೇ ನೋಟ್ಯಂತರ, ತೆರಿಗೆ ಇಲಾಖೆ ದಾಳಿಯಿಂದ ಪ್ರತ್ಯೇಕವಾದಿಗಳಿಗೆ ಹಣದ ಅಭಾವ ಉಂಟಾಗಿತ್ತಲ್ಲದೇ ಕಣಿವೆ ರಾಜ್ಯಗಳಲ್ಲಿ ಉಂಟಾಗುತ್ತಿರುವ ನಿರಂತರ ಗಲಭೆ, ಕಲ್ಲು ತೂರಾಟಗಳನ್ನು ನಿಯಂತ್ರಿಸಲು ನಿರಂತರವಾಗಿ ಕಠಿಣ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದ ವಿಚಾರ ಗೊತ್ತೇ ಇದೆ!! ಕೇಂದ್ರದ ನಿರ್ಧಾರಗಳಿಂದ ವಿಚಲಿತವಾಗಿರುವ ಪ್ರತ್ಯೇಕವಾದಿಗಳು ಹಲವು ಅಡ್ಡ ಮಾರ್ಗಗಳನ್ನು ಹಿಡಿದು, ಹಿಂಸೆಗೆ ಪ್ರಚೋದನೆ ನೀಡುತ್ತಿರುವುದು ಈ ಮೂಲಕ ಸಾಬೀತಾಗುತ್ತಿದೆ.
ಅಂತೂ ಪ್ರತಿಬಾರಿಯೂ ಒಂದಲ್ಲ ಒಂದು ಕುತಂತ್ರಗಳನ್ನು ಮಾಡುತ್ತಿರುವ ಪ್ರತ್ಯೇಕವಾದಿಗಳು ಮತ್ತು ಪಾಕ್ ಪೆÇೀಷಿತ ಭಯೋತ್ಪಾದಕರು ಯುವಕರ ತಲೆ ಕೆಡಿಸಿ ದ್ವೇಷದ ಬೀಜ ಬಿತ್ತುತ್ತಿರುವುದಂತೂ ಅಕ್ಷರಶಃ ನಿಜ!! ಹಾಗಾಗಿ ಇದೀಗ ಹೊಸ ದಾರಿಗಳನ್ನು ಹುಡುಕುತ್ತಿರುವ ಪ್ರತ್ಯೇಕವಾದಿಗಳನ್ನು ನರೇಂದ್ರ ಮೋದಿ ಸರ್ಕಾರ ಅದ್ಯಾವ ರೀತಿ ಮಟ್ಟ ಹಾಕುತ್ತೆ ಅನ್ನೋದನ್ನು ಕಾದು ನೋಡಬೇಕಾಗಿದೆ!!
ಮೂಲ:
– ಅಲೋಖಾ